ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ, ಬೆಂಗಳೂರಿಗೆ ಬಂದಿಳಿದ ರಜನಿಕಾಂತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಲು ರಜನಿಕಾಂತ್ ಬೆಂಗಳೂರಿಗೆ ಬಂದಿದ್ದಾರೆ.

ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದು, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನಂ ಅವರು ಸ್ವಾಗತ ಕೋರಿದ್ದಾರೆ.

ಇಂದು ಸಂಜೆ ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾಕಷ್ಟು ಗಣ್ಯರು ಭಾಗಿಯಾಗಲಿದ್ದಾರೆ. ಜ್ಯೂ. ಎನ್‌ಟಿಆರ್ ಕೂಡ ಕಾರ್ಯಕ್ರಮಕ್ಕೆ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಿದ್ದಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ವಿಧಾನಸೌಧಕ್ಕೆ ಬರುತ್ತಿದ್ದಾರೆ. ಕಾರ್ಯಕ್ರಮಕ್ಕಾಗಿ ವಿಧಾನ ಸೌಧದ ಮುಂದೆ ಚಾರಿತ್ರಿಕ ಮಂಟಪವನ್ನು ನಿರ್ಮಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!