ದಿಢೀರ್ ರಾಜ್ಯಪಾಲರನ್ನು ಭೇಟಿಯಾದ ರಜನಿಕಾಂತ್: ತಲೈವಾ ಅಭಿಮಾನಿಗಳಲ್ಲಿ ಅಚ್ಚರಿ!!

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಸೋಮವಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ದಿಢೀರ್ ಭೇಟಿ‌‌ ಮಾಡಿದ್ದಾರೆ.
ತಲೈವನ ಈ ಭೇಟಿ ರಾಜಕೀಯ ಪಡಸಾಲೆಯಲ್ಲಿ,ಅಭಿಮಾನಿಗಳಲ್ಲಿ ಹಲವು ಕುತೂಹಲ, ಚರ್ಚೆಗೆ ಆಹಾರವಾಗಿದೆ.
ರಜನಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸುವ ಅವರು, ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಪೋಯಸ್ ಗಾರ್ಡನ್ ನಿವಾಸದ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ರಜನಿ, ಇದು ಸೌಜನ್ಯದ ಭೇಟಿ. ನಾನು ಸುಮಾರು 30 ನಿಮಿಷಗಳ ಕಾಲ ರಾಜ್ಯಪಾಲರೊಂದಿಗೆ ಮಾತನಾಡಿದ್ದೇನೆ. ತಮಿಳುನಾಡಿಗಾಗಿ ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ ಎಂದು ರಾಜ್ಯಪಾಲರು ಹೇಳಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!