ಹೊಸದಿಗಂತ ಡಿಜಿಟಲ್ ಡೆಸ್ಕ್:
ಐವರು ಸೇನಾ ಯೋಧರು ಮಡಿದ ಸ್ಥಳದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಪರಿಶೀಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಜಮ್ಮು ಮತ್ತು ಕಾಶ್ಮೀರದ ರಜಾರಿಗೆ ಭೇಟಿ ನೀಡುತ್ತಿದ್ದಾರೆ.
ರಕ್ಷಣಾ ಸಚಿವರೊಂದಿಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕೂಡ ಇರಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಭಯೋತ್ಪಾದಕರ ವಿರುದ್ಧ ನಡೆಯುತ್ತಿದ್ದ ಎನ್ಕೌಂಟರ್ನಲ್ಲಿ ನಡೆದ ಸ್ಫೋಟದಲ್ಲಿ ಐವರು ಸೇನಾ ಯೋಧರು ಹುತಾತ್ಮರಾಗಿದ್ದರು. ಪೂಂಛ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತ ಭಯೋತ್ಪಾದಕರನ್ನು ಬಂಧಿಸಲು ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ.