ನಾಳೆ ರಾಜ್ಯ ಕಾಂಗ್ರೆಸ್‌ನಿಂದ ‌ರಾಜಭವನ ಚಲೋ, ರಾಜಭವನ ಮುತ್ತಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ದೇಶಾದ್ಯಾಂತ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯದಲ್ಲೂ ಈ ಪ್ರತಿಭಟನೆ ಕಾವು ಜೋರಾಗಿದೆ. ನಾಳೆ ರಾಜ್ಯ ಕಾಂಗ್ರೆಸ್‌ ರಾಜಭವನ ಚಲೋ ಹಮ್ಮಿಕೊಂಡಿದೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ‘ನಾಳೆ ಕಾಂಗ್ರೆಸ್‌ ಕಚೇರಿಯಿಂದ ರಾಜಭವನದವರೆಗೆ ಮೆರವಣಿಗೆ ಮೂಲಕ ತೆರಳಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ. ನಾಳೆ ಬೆಳಿಗ್ಗೆ 9.30ರಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್‌ನ ನೂರಾರು ಕಾರ್ಯಕರ್ತರ ಜತೆ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!