ರಾಜ್ಯಸಭೆಗೆ ಡಾ. ಹೆಗ್ಗಡೆ ನಾಮನಿರ್ದೇಶನ: ಕರ್ನಾಟಕದ ಜನತೆಗೆ ಹೆಮ್ಮೆ ಎಂದ ನಳಿನ್‌ ಕುಮಾರ್ ಕಟೀಲ್

ಹೊಸದಿಗಂತ ವರದಿ,ಮಂಗಳೂರು:

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವುದು ಕರ್ನಾಟಕದ ಸಮಸ್ತ ಜನತೆಗೆ ಹೆಮ್ಮೆಯ ವಿಷಯವಾಗಿದೆ. ಧಾರ್ಮಿಕ, ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿಗೆ ಅತ್ಯಪೂರ್ವ ಕೊಡುಗೆ ನೀಡಿರುವ ಡಾ.ಹೆಗ್ಗಡೆ ಅವರ ಜ್ಞಾನ, ಅನುಭವ ರಾಜ್ಯಸಭೆಗೆ ವರದಾನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ದೇಶದ ಹೆಮ್ಮೆಯ ಕ್ರೀಡಾಪಟು ಪಿ.ಟಿ.ಉಷಾ, ಚಿತ್ರ ಕಥೆಗಾರ ವಿ.ವಿಜಯೇಂದ್ರ
ಮತ್ತು ಸಂಗೀತ ದಿಗ್ಗಜ ಇಳಯರಾಜ ಅವರನ್ನು ಅಭಿನಂದಿಸುವುದಾಗಿ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!