ರಾಜ್ಯಸಭೆ ಚುನಾವಣೆ: ನಟ ಜಗ್ಗೇಶ್ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯಸಭೆ ಚುನಾವಣಾ ಬಿಜೆಪಿ ಅಭ್ಯರ್ಥಿಗಳಾದ ನಟ ಜಗ್ಗೇಶ್, ಲೆಹರ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮಾಧುಸ್ವಾಮಿ, ಆರ್.ಅಶೋಕ್ ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್, ನಟ ಜಗ್ಗೇಶ್, ಲೆಹರ್ ಸಿಂಗ್ ಮೂವರು ಅಭ್ಯರ್ಥಿಗಳ ಹೆಸರನ್ನು ಪಕ್ಷ ಘೋಷಣೆ ಮಾಡಿದೆ.‌ ಇಂದು ಮೂವರೂ ನಾಮಪತ್ರ ಸಲ್ಲಿಸಿದ್ದಾರೆ. ಮೂರು ಸ್ಥಾನದಲ್ಲೂ ಬಿಜೆಪಿ ಗೆಲ್ಲಲಿದೆ. ಜೂನ್ 10ನೇ ತಾರೀಕು ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ನಟ ಜಗ್ಗೇಶ್, ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ. ಸಿಎಂಗೆ, ಪಕ್ಷದ ಅಧ್ಯಕ್ಷರಿಗೆ, ಶಾಸಕರಿಗೆ, ಸಂಘದ ಪ್ರಮುಖರಿಗೆ ನಾನು ಆಭಾರಿಯಾಗಿದ್ದೇನೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!