August 29, 2026
Saturday, August 29, 2026
spot_img

ರಾಜ್ಯಸಭಾ ಚುನಾವಣೆ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ರಾಜ್ಯಸಭಾ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಕರ್ನಾಟಕದಿಂದ ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ಭೇಟಿ ನೀಡಿದ ಎಐಸಿಸಿ ಅಧ್ಯಕ್ಷರು, ಮುಂಬರುವ ಜೂನ್ 18 ರಂದು ನಡೆಯಲಿರುವ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ಅಧಿಕೃತ ದಾಖಲೆಗಳನ್ನು ಹಸ್ತಾಂತರಿಸಿದರು.

ದಿಗ್ಗಜ ನಾಯಕರ ಸಾಥ್:

ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಕೆ ಮಾಡುವ ಪ್ರಮುಖ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಒಟ್ಟಾಗಿ ಭಾಗವಹಿಸಿ ಬೆಂಬಲ ಸೂಚಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

ಒಗ್ಗಟ್ಟಿನ ಮಂತ್ರ ಜಪಿಸಿದ ಖರ್ಗೆ:

ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಮುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ನಮ್ಮ ಪಕ್ಷದ ಶಾಸಕರು ಹಾಗೂ ಹಿರಿಯ ನಾಯಕರು ಒಮ್ಮತದಿಂದ ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ಜೂನ್ 18 ರಂದು ನಡೆಯಲಿರುವ ಚುನಾವಣೆಯಲ್ಲಿ ನಮ್ಮ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ,” ಎಂದು ತಿಳಿಸಿದರು. ಇದೇ ವೇಳೆ ಅವರು ತಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !