ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಕಣಕ್ಕಿಳಿದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದಿಂದ ಅಚ್ಚರಿಯ ಆಯ್ಕೆಯನ್ನು ಮಾಡಿದೆ.
ಕರ್ನಾಟಕದಿಂದ ದೆಹಲಿ ಮೂಲದ ಅಜಯ್​ ಮಾಕೆನ್​, ಹಾಲಿ ಸದಸ್ಯರಾದ ಡಾ. ಸೈಯದ್​ ನಾಸೀರ್​ ಹುಸೇನ್​ ಹಾಗೂ ಜಿ.ಸಿ.ಚಂದ್ರಶೇಖರ್​ ಅವರನ್ನು ಆಯ್ಕೆ ಮಾಡಲಾಗಿದೆ.

ಮಧ್ಯಪ್ರದೇಶದಿಂದ ಅಶೋಕ್ ಸಿಂಗ್ ಮತ್ತು ತೆಲಂಗಾಣದಿಂದ ರೇಣುಕಾ ಚೌಧರಿ ಮತ್ತು ಎಂ.ಅನಿಲ್ ಕುಮಾರ್ ಯಾದವ್​ಗೆ ಟಿಕೆಟ್​ ನೀಡಲಾಗಿದೆ.

ಫೆಬ್ರವರಿ 27ರಂದು ನಡೆಯುವ ಚುನಾವಣೆಯಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಕಾಂಗ್ರೆಸ್​ನಿಂದ ಮೂರು ಹಾಗೂ ಬಿಜೆಪಿಯಿಂದ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿಯಿಂದ ಬಾಗಲಕೋಟೆ ಮೂಲದ ಮಾಜಿ ವಿಧಾನಪರಿಷತ್​ ಸದಸ್ಯ ನಾರಾಯಣ ಭಾಂಡಗೆ ಅವರಿಗೆ ಟಿಕೆಟ್​ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!