ರಾಜ್ಯಸಭೆ ಚುನಾವಣೆ: 57ರಲ್ಲಿ 41 ಮಂದಿ ಅವಿರೋಧ ಆಯ್ಕೆ, 16 ಸ್ಥಾನಗಳಿಗೆ ಮತದಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜೂನ್​ 10ರಂದು ರಾಜ್ಯಸಭೆಯ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ 12 ರಾಜ್ಯದ 41 ಸ್ಥಾನಗಳಿಗೆ ಅವಿರೋಧವಾಗಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಬಿಜೆಪಿಯ 14 ಅಭ್ಯರ್ಥಿಗಳು ಸಹ ಸೇರಿಕೊಂಡಿದ್ದು,ಇದೀಗ 16 ಸ್ಥಾನಗಳಿಗೆ ಮತದಾನ ನಡೆಯಲಿದೆ.
ಕಾಂಗ್ರೆಸ್​​ ಪಕ್ಷದ ಪಿ. ಚಿದಂಬರಂ ಸೇರಿದಂತೆ ಕಾಂಗ್ರೆಸ್​ನ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಆಂಧ್ರಪ್ರದೇಶದ ನಾಲ್ಕು ಸ್ಥಾನಗಳಿಗಾಗಿ ವೈಎಸ್​​​ಆರ್​ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ ಮೂವರನ್ನು ಆಯ್ಕೆ ಮಾಡಿದ್ದರೆ, ಆಮ್​ ಆದ್ಮಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ, ಎಐಡಿಎಂಕೆಯ ಇಬ್ಬರು ಅಭ್ಯರ್ಥಿಗಳು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ಅವಿರೋಧವಾಗಿ ಕಾಂಗ್ರೆಸ್​ನ ಪಿ. ಚಿದಂಬರಂ, ಕಪಿಲ್ ಸಿಬಲ್​, ರಾಜೀವ್ ಶುಕ್ಲಾ ಆಯ್ಕೆಯಾಗಿದ್ದು, ಬಿಜೆಪಿಯಿಂದ ಸುಮಿತ್ರಾ ವಾಲ್ಮೀಕಿ, ಕವಿತಾ ಪಾಟಿದಾರ್​ ಆಯ್ಕೆಯಾಗಿದ್ದಾರೆ.
ಯಾವ ರಾಜ್ಯದಲ್ಲಿ ಎಷ್ಟು ಅಭ್ಯರ್ಥಿಗಳು ಅವಿರೋಧ ಆಯ್ಕೆ:
ಉತ್ತರ ಪ್ರದೇಶದಲ್ಲಿ-11, ತಮಿಳುನಾಡು- 6, ಬಿಹಾರ -5, ಆಂಧ್ರಪ್ರದೇಶ-4, ಮಧ್ಯಪ್ರದೇಶ, ಒಡಿಶಾದಲ್ಲಿ ತಲಾ ಮೂವರು, ಛತ್ತೀಸ್​ಗಢ, ಪಂಜಾಬ್, ತೆಲಂಗಾಣ ಮತ್ತು ಜಾರ್ಖಂಡ್​ನಲ್ಲಿ ತಲಾ ಇಬ್ಬರು ಹಾಗೂ ಉತ್ತರಾಖಂಡದಲ್ಲಿ ತಲಾ ಓರ್ವ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
ಉಳಿದ ಸ್ಥಾನಗಳಿಗಾಗಿ ಜೂನ್​ 10ರಂದು ವೋಟಿಂಗ್ ನಡೆಯಲಿದ್ದು, ಇದರಲ್ಲಿ ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಕರ್ನಾಟಕ ಸಹ ಸೇರಿಕೊಂಡಿದೆ.
ಕರ್ನಾಟಕದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ನಟ ಜಗೇಶ್ ಮತ್ತು ಮೂರನೇ ಅಭ್ಯರ್ಥಿಯಾಗಿ ಲೆಹರ್​ ಸಿಂಗ್​ ಕಣದಲ್ಲಿದ್ದಾರೆ. ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು, ಇದಕ್ಕೆ ತೀವ್ರ ಪೈಪೋಟಿ ನೀಡುವ ಉದ್ದೇಶದಿಂದ ಜೆಡಿಎಸ್​ ಕೂಡ ತನ್ನ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!