ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ, ಹರಿಹರ ತಾಲೂಕು ಪರಿಸರದಲ್ಲಿ ಗಿಡ ನೆಟ್ಟು ಪೋಷಿಸುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಸಾಲುಮರದ ವೀರಾಚಾರ್ (70) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಿಟ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ವಿಚಾರವಾಗಿ ಅವರು ಗ್ರಾಮಸ್ಥರ ಜೊತೆಗೆ ಸೇರಿ ನಡೆಸುತ್ತಿದ್ದ ಹೋರಾಟ ಫಲ ನೀಡಿಲ್ಲ ಎಂಬ ಕಾರಣಕ್ಕೆ ಮನನೊಂದು ಅವರು ಈ ಕೃತ್ಯ ನಡೆಸಿದ್ದಾರೆ ಎಂಬ ದೂರು ಕೇಳಿಬಂದಿದೆ.
ಇಲ್ಲಿನ ನ್ಯಾಯಬೆಲೆ ಅಂಗಡಿಯನ್ನು ಬೇರೆಯವರಿಗೆ ವಹಿಸಬೇಕು ಎಂಬುದು ಅವರ ಒತ್ತಾಯವಾಗಿತ್ತು. ಆದರೆ ಇದು ಈಡೇರಿರಲಿಲ್ಲ. ವೀರಾಚಾರ್ ಆತ್ಮಹತ್ಯೆ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಗ್ರಾಮಸ್ಥರರು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಪ್ಪಟ ಪರಿಸರ ಪ್ರೇಮಿಯಾಗಿದ್ದ ವೀರಾಚಾರ್ ಅವರ ಪರಿಸರ ಕಾಳಜಿಗೆ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.