ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ನಾಳೆ ರಕ್ಷಾ ಬಂಧನ ಸಂಭ್ರಮ. ಈ ಕ್ಷಣ ಪ್ರಧಾನಿಗೆ ರಾಖಿ ಕಟ್ಟಲು ನರೇಂದ್ರ ಮೋದಿ (Narendra Modi) ಅವರ ರಾಖಿ ಸಹೋದರಿ ಎಂದು ಕರೆಯಲ್ಪಡುವ ಪಾಕಿಸ್ತಾನಿ ಮೂಲದ ಕಮರ್ ಮೊಹ್ಸಿನ್ ಶೇಖ್ (Qamar Mohsin Sheikh) ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ.
ಕಳೆದ 30 ವರ್ಷಗಳಿಂದ ಪ್ರತಿ ವರ್ಷ ಮೋದಿಗೆ ರಾಖಿ ಕಳುಹಿಸುತ್ತಿದ್ದಾರೆ. ಈ ಬಾರಿ ನಾನೇ ‘ರಾಖಿ’ ಮಾಡಿದ್ದೇನೆ. ಅವರು ಓದಲು ಇಷ್ಟಪಡುವ ಕಾರಣ ನಾನು ಅವರಿಗೆ ಕೃಷಿ ಪುಸ್ತಕವನ್ನು ಉಡುಗೊರೆಯಾಗಿ ನೀಡುತ್ತೇನೆ. ಕಳೆದ ಎರಡು-ಮೂರು ವರ್ಷಗಳಿಂದ ಕೋವಿಡ್ -19 ನಿಂದ ಹೋಗಲು ಸಾಧ್ಯವಾಗಲಿಲ್ಲ. ಆದರೆ ಈ ಬಾರಿ, ನಾನು ಅವರನ್ನು ಖುದ್ದಾಗಿ ಭೇಟಿಯಾಗುತ್ತಿದ್ದೇನೆ ಎಂದು ಶೇಖ್ ಹೇಳಿದ್ದಾರೆ.
ನಾನು ಅವರಿಗಾಗಿ ನಿರ್ದಿಷ್ಟವಾಗಿ ಕೆಂಪು ಬಣ್ಣದ ರಾಖಿಯನ್ನು ಮಾಡಿದ್ದೇನೆ. ಕೆಂಪು ಬಣ್ಣವನ್ನು ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮೊದಲು, ನಾನು ಅವರರು ಗುಜರಾತ್ನ ಮುಖ್ಯಮಂತ್ರಿಯಾಗಬೇಕೆಂದು ಪ್ರಾರ್ಥಿಸಿದ್ದೆ, ಅವರು ಆದರು. ನಾನು ರಾಖಿ ಕಟ್ಟಿದಾಗಲೆಲ್ಲ ಅವರು ಪ್ರಧಾನಿಯಾಗಬೇಕು ಎಂಬ ನನ್ನ ಆಸೆಯನ್ನು ವ್ಯಕ್ತಪಡಿಸುತ್ತಿದ್ದೆ. ಅವರ ಪ್ರತಿಕ್ರಿಯೆ ಯಾವಾಗಲೂ ಸಕಾರಾತ್ಮಕವಾಗಿತ್ತು, ನಿಮ್ಮ ಎಲ್ಲಾ ಆಸೆಗಳನ್ನು ದೇವರು ಪೂರೈಸುತ್ತಾನೆ. ಈಗ, ಅವರು ಪ್ರಧಾನಿಯಾಗಿ ದೇಶಕ್ಕಾಗಿ ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ, ಅವರು ಇದಕ್ಕೆ ಅರ್ಹರು ಏಕೆಂದರೆ ಅವರು ಆ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಮತ್ತು ಪ್ರತಿ ಬಾರಿಯೂ ಅವರು ಭಾರತದ ಪ್ರಧಾನಿಯಾಗಬೇಕೆಂದು ನಾನು ಬಯಸುತ್ತೇನೆ ಎಂದಿದ್ದಾರೆ.
ಕಳೆದ ವರ್ಷ ಪ್ರಧಾನಿಯವರಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ಕಳುಹಿಸುವಾಗ, ಈ ವರ್ಷ ಅವರನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ ಎಂದು ಶೇಖ್ ಹೇಳಿದ್ದರು.