AYODHYA | ರಾಮಮಂದಿರ ಪ್ರತಿಷ್ಠಾಪನೆ ವಿಧಿಗಳಿಗೆ ಇಂದು ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡೀ ಜಗತ್ತೇ ಕಾಯುತ್ತಿರುವ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ.

ಇಂದಿನಿಂದ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ವಿಧಿಗಳು ಆರಂಭವಾಗಲಿವೆ. ಈ ಬಗ್ಗೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದು, ಇನ್ನೆರಡು ದಿನದಲ್ಲಿ ರಾಮಮಲಲಾನ ವಿಗ್ರಹವನ್ನು ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ ಎಂದಿದ್ದಾರೆ.

ಜ.೨೨ರ ಮಧ್ಯಾಹ್ನ 12:20ರ ಅಭಿಜಿನ್ ಮಹೂರ್ತದಲ್ಲಿ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಎಲ್ಲ ರೀತಿಯ ತಯಾರಿಗಳು ಪೂರ್ಣಗೊಂಡಿವೆ ವಾರಣಾಸಿಯ ಪುರೋಹಿತರಾದ ಗಣೇಶ್ವರ ಶಾಸ್ತ್ರಿಗಳು ಪ್ರಾಣಪ್ರತಿಷ್ಠಾಪನೆ ಸಮಯ ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!