ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ನಮ್ಮ ಪೂರ್ವಜರು 500 ವರ್ಷಗಳ ಕಾಲ ಹೋರಾಟ ಮಾಡಿದ್ದಾರೆ. ಲಕ್ಷಾಂತರ ಜನರು ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಮೋದಿ ಹೇಳಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದ ಮರುದಿನವೇ ಮಂದಿರ ನಿರ್ಮಾಣದ ನಿರ್ಧಾರ ಕೈಗೊಳ್ಳಬೇಕಿತ್ತು. ಆದರೆ ಅವರು ಅದನ್ನು ತೆಗೆದುಕೊಳ್ಳಲಿಲ್ಲ. ಆದರೆ ಅದನ್ನು 75 ವರ್ಷಗಳ ನಂತರ ನಿರ್ಮಿಸಲಾಯಿತು. ಈಗ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಮಂದಿರ ನಿರ್ಮಾಣವಾಗಿದೆ.
ಈ ಪುಣ್ಯದ ಕೆಲಸಕ್ಕೆ ಕಾರಣ ನೀವು. ನಿಮ್ಮ ಒಂದು ಮತದಿಂದ ಇದು ಸಾಧ್ಯವಾಯಿತು. ದೇಶದಲ್ಲಿ ರಾಮಭಕ್ತರ ಹಣದಿಂದ ರಾಮಮಂದಿರ ನಿರ್ಮಾಣವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.