ರಸ್ತೆ ಅಪಘಾತ: ರಂಭಾಪುರಿ ಶ್ರೀಗಳು ಅಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಸ್ತೆ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಅಪಾಯದಿಂದ ಪಾರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಚಿರಸ್ತಹಳ್ಳಿಯಲ್ಲಿ ನಡೆದಿದೆ.

ಶ್ರೀಗಳು ರಂಭಾಪುರಿ ಪೀಠದಿಂದ ಆಲಮಟ್ಟಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಶಿವಮೊಗ್ಗ- ಹೊಸಪೇಟೆ ರಾಜ್ಯ ಹೆದ್ದಾರಿ 25ರಲ್ಲಿ ಹರಿಹರದಿಂದ ಹರಪನಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದಾಗ ಶ್ರಿಗಳ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶ್ರೀಗಳ ಕಾರಿನ ಮೇಲೆ ಹಾರಿ ಬಿದ್ದಿದ್ದಾರೆ. ಕಾರಿನಲ್ಲಿದ್ದ ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ.

ಈ ಅಪಘಾತದಲ್ಲಿ ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಸದ್ಯ ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!