ಜೆಡಿಎಸ್ ನತ್ತ ರಮೇಶ್ ಜಾರಕಿಹೊಳಿ ಒಲವು: ಈ ಕುರಿತು ಮಾಜಿ ಸಚಿವ ನೀಡಿದ ಸ್ಪಷ್ಟನೆ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದ್ದು, ಇದೀಗ ಈ ಬಗ್ಗೆ ಸ್ವತಃ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಬೆಳಗುಂದಿ ಗ್ರಾಮದಲ್ಲಿ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ನಾನು ಮಾತನಾಡಿದ್ದು ನಿಜ. ಆದರೆ ಜೆಡಿಎಸ್ ಸೇರುವ ಯೋಚನೆಯಿಲ್ಲ ಎಂದು ತಿಳಿಸಿದರು.

ಪಕ್ಷದ ಚಟುವಟಿಕೆಯಿಂದ ದೂರ ಇರಲು ಕಾರಣ ಕಳೆದ ಒಂದು ವರ್ಷದಿಂದ ಮನಸ್ಸಿಗೆ ಬೇಜಾರಾಗಿತ್ತು. ನಿತ್ಯವೂ ಕುಮಾರಸ್ವಾಮಿ ನನ್ನ ಜೊತೆ ಫೋನ್ ನಲ್ಲಿ ಮಾತನಾಡುತ್ತಿರುತ್ತಾರೆ. ನಿನ್ನ ಉದ್ದೇಶ ನೀನು ಮಾಡು, ನನ್ನ ಉದ್ದೇಶ ನಾನು ಮಾಡುತ್ತೇನೆ. ನಮ್ಮಿಬ್ಬರ ಉದ್ದೇಶ ಒಂದೇ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬಾರದು ಎಂದು ಹೇಳಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!