ಹೊಸದಿಗಂತ ಡಿಜಿಟಲ್ ಡೆಸ್ಕ್ :
ಡಿಕೆ ಶಿವಕುಮಾರ್ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಮಿತ್ ಶಾರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ.
ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ. ಸಿಡಿ ಕೇಸ್ ಸಿಬಿಐಗೆ ವಹಿಸಲು ರಮೇಶ್ ಜಾರಕಿಹೊಳಿ ಮನವಿ ಮಾಡಲಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಎಚ್ಚರಿಕೆ :
ಡಿಕೆ ಶಿವಕುಮಾರ್ ಆಪ್ತರಿಂದ ಜಾರಕಿಹೊಳಿ ವಿರುದ್ದ ಕ್ರಮ ಜರುಗಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮೂಲಕ ಹಿರಿಯ ವಕೀಲ ಸಂಕೇತ್ ಏಣಗಿ ನಿನ್ನೆ ತಿಳಿಸಿದ್ದಾರೆ.
ಟ್ವಿಟ್ಟರ್ ನಲ್ಲಿ, “KPCC ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್ ವಿರುದ್ಧ ನಿರಂತರ ಮಿಥ್ಯಾಪವಾದ, ನಿಂದನೆ, ದೋಷಾರೋಪಣೆ ಹಾಗೂ ಅವರ ಪ್ರಸಿದ್ಧಿ ಘಾಸಿಗೊಳಿಸಲು ಸುಳ್ಳು ಹಾಗೂ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶೀಘ್ರವೇ ಮಾನನಷ್ಟ ಮೊಕದ್ದಮೆ ಸಹಿತ ಇನ್ನಿತರ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಟ್ವೀಟ್ ಮಾಡಿದ್ದಾರೆ.