ದಿಗಂತ ವರದಿ ವಿಜಯಪುರ:
ಲೋಕಸಭೆ ಚುನಾವಣೆ ಮೀಸಲು ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಅವರು ಕುಟುಂಬ ಸಮೇತ ಮತಗಟ್ಟೆಗೆ ತೆರಳಿ ಮಂಗಳವಾರ ಬೆಳಗ್ಗೆ ಮತ ಚಲಾಯಿಸಿದರು.
ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಭೂತನಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ 14 ರಲ್ಲಿ ಮತ ಚಲಾಯಿಸಿದರು.
ಸಂಸದ ರಮೇಶ ಜಿಗಜಿಣಗಿ ಹಾಗೂ ಅವರ ಇಬ್ಬರು ಮಕ್ಕಳಾದ ಆನಂದ, ವಿನೋದ, ಸೋಸೆಯಂದಿಯರಾದ ರೇಷ್ಮಾ ಗೀತಾ, ಮೊಮ್ಮಗಳು ಸ್ನೇಹಾ ಮತಚಲಾಯಿಸಿದರು. ಮೊಮ್ಮಗಳು ಸ್ನೇಹಾ ಇದೆ ಮೊದಲಬಾರಿಗೆ ಮತ ಚಲಾಯಿಸಿದರು.
ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಿಗಜಿಣಗಿ, ಕೇವಲ ಭೂತನಾಳ ಮಾತ್ರವಲ್ಲದೆ ಜಿಲ್ಲೆಯ ಎಲ್ಲೆಡೆ ಬಿಜೆಪಿ ವಾತಾವಣ ಚೆನ್ನಾಗಿದೆ. ಜಿಲ್ಲೆಯ ವಿವಿಧ ಎಲ್ಲ ಗ್ರಾಮಗಳಿಂದ ಕರೆ ಬರುತ್ತಿದ್ದು ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದರು. ವಿಜಯಪುರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿಗೆ ಒನ್ ಸೈಡ್ ಆಗಲಿದೆ ಎಂದರು.