ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಪ್ರಧಾನಿ ಮೋದಿ ದೇಶಕ್ಕೆ ಅಂಟಿದ ಶನಿ’ ಎಂಬ ರಮೇಶ್ ಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗರಂ ಆಗಿದ್ದಾರೆ.
ಚಿತ್ರದುರ್ಗದ ಭರಮಸಾಗರದಲ್ ನಡೆದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದ ಅವರು, ರಮೇಶ್ ಕುಮಾರ ಅವರಂಥವರಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಚುನಾವಣೆ ಫಲಿತಾಂಶವೇ ಅವರಿಗೆ ಉತ್ತರ ಕೊಡುತ್ತದೆ. ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದನ್ನ ಅವರು ನೋಡಲಿದ್ದಾರೆ ಟಾಂಗ್ ನೀಡಿದರು.
ಬಿಎಸ್ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಕಾರಜೋಳ ಪರ ಭರ್ಜರಿಯಾಗಿ ಮತಯಾಚನೆ ನಡೆಸಿದರು. ಭರಮಸಾಗರ ಭಾಗದಲ್ಲಿ ಲಿಂಗಾಯತ ಮತಗಳು ನಿರ್ಣಾಯಕವಾಗಿವೆ. ಈ ಹಿನ್ನೆಲೆ ಲಿಂಗಾಯತ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಬಿಎಸ್ವೈ ಅಖಾಡಕ್ಕೆ ಇಳಿದಿದ್ದಾರೆ .
ಈ ವೇಳೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕ ಎಸ್ ಕೆ ಬಸವರಾಜನ್ ಸೇರಿ ಗಣ್ಯರು ಉಪಸ್ಥಿತರಿದ್ದರು.