ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಆರೋಪಿಯ ಮಾಹಿತಿ ಸಿಕ್ಕಿದೆ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಟು ವಿಶೇಷ ತಂಡಗಳನ್ನು ರಚಿಸಲಾಗಿದೆ. ನಾವು ಎಲ್ಲಾ ಆಯಾಮಗಳಲ್ಲಿ ಅನ್ವೇಷಿಸುತ್ತಿದ್ದೇವೆ. ನಮಗೆ ಕೆಲವು ಮಾಹಿತಿ ಸಿಕ್ಕಿದೆ. ನಾವು ಹೆಚ್ಚುವರಿ ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ವಿಧಿವಿಜ್ಞಾನ ಪ್ರಯೋಗಾಲಯ ಈಗಾಗಲೇ ಮಾದರಿಗಳನ್ನು ಸಂಗ್ರಹಿಸಿ ತಾಂತ್ರಿಕ ದತ್ತಾಂಶವನ್ನು ಸಿದ್ಧಪಡಿಸುತ್ತಿದೆ. ಬಾಂಬ್ ಸ್ಫೋಟದಲ್ಲಿ ಭಾಗಿಯಾದ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿದೆ. ಕೆಲವೇ ದಿನಗಳಲ್ಲಿ ಆತನನ್ನು ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.