ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಿವಮೊಗ್ಗ, ಹುಬ್ಬಳ್ಳಿಯಲ್ಲೂ ಎನ್‌ಐಎ ಮಿಂಚಿನ ದಾಳಿ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದಾಳಿ ನಡೆಸಿರುವ ಬೆನ್ನಿಗೇ ರಾಷ್ಟ್ರೀಯ ತನಿಖಾ ದಳ ಶಿವಮೊಗ್ಗ , ಹುಬ್ಬಳಿ ಜಿಲ್ಲೆಗಳಲ್ಲಿ ಕೂಡಾ ದಾಳಿ ನಡೆಸಿದೆ.

ಮೂಲಗಳ ಮಾಹಿತಿ ಪ್ರಕಾರ ಶಿವಮೊಗ್ಗದ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿಯಲ್ಲಿ ಮೂವರ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ರಾಮೇಶ್ವರಂ ಕೆಫೆ ಪ್ರಕರಣದ ಆರೋಪಿಯನ್ನು ಈಗಾಗಲೇ ಪತ್ತೆಮಾಡಿರುವ ಎನ್‌ಐಎ, ಈತ 2019 ರಿಂದ ಎನ್‌ಐಎ ಅಧಿಕಾರಿಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಉಗ್ರ ಅನ್ನೋ ಮಾಹಿತಿ ಬಹಿರಂಗಪಡಿಸಿತ್ತು. ಇದೀಗ ಆತನಿಗೆ ಕೃತ್ಯದಲ್ಲಿ ಸಾಥ್ ನೀಡಿದವರಿಗಾಗಿ ಎಲ್ಲೆಡೆ ಬಲೆ ಬೀಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!