ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಳ್ಳಂಬೆಳಗ್ಗೆ ಬೆಂಗಳೂರಿನ ಐದು ಕಡೆ NIA ರೇಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮೇಶ್ವರಂನ ಕೆಫೆಯಲ್ಲಿ ನಡೆದ ಘಟನೆಯ ಕುರಿತು ತನಿಖೆ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬೆಂಗಳೂರು ನಗರದ ಐದು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ.

ಶಂಕಿತನ ಮನೆಯನ್ನು ಶೋಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಶನಿವಾರ (ಮಾ.23) ಬೆಂಗಳೂರಿನಲ್ಲಿ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ಮಂಗಳವಾರ ವರದಿಯಾಗಿತ್ತು.

ಎನ್‌ಐಎ ಅಧಿಕಾರಿಗಳ ತಂಡವು ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರನ್ನು ಪತ್ತೆಹಚ್ಚಲು ಚೆನ್ನೈನ ಮೂರು ಸ್ಥಳಗಳಲ್ಲಿ ಶೋಧನಡೆಸುತ್ತಿರುವುದು ತಿಳಿದು ಬಂದಿದೆ. ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಭಯೋತ್ಪಾದಕರ ಪರ ಹಣ ಸಂಗ್ರಹ ನೀಡುವ ಶಂಕೆಯ ಮೇಲೆ ಶಂಕಿತರ ಮನೆಗಳಲ್ಲಿ ಶೋಧ ಕಾರ್ಯ ನಡೆಸಲಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!