ರಾಮೇಶ್ವರಂ ಕೆಫೆ ಸ್ಫೋಟ: ದುಷ್ಕರ್ಮಿಗಳ ಫೋಟೋ ಬಿಡುಗಡೆ ಮಾಡಿದ NIA

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಆರೋಪಿ ಅಬ್ದುಲ್ ಮತೀನ್ ಹಾಗೂ ಆತನ ಸಹಚರ ಅಹಮದ್ ತಾಹ ಅವರ ಫೋಟೋವನ್ನು ಎನ್‌ಐಎ ಬಿಡುಗಡೆ ಮಾಡಿದೆ. ಸುಳಿವು ನೀಡುವವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

ಬೆಂಗಳೂರಿನಲ್ಲಿ ಮಾರ್ಚ್ 1 ರಂದು ನಡೆದಿದ್ದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹುಡುಕಾಟ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರೋಪಿಗಳ ಫೋಟೋವನ್ನು ಹಂಚಿಕೊಂಡಿದೆ.

ಅಬ್ದುಲ್ ಮತೀನ್ ಹಾಗೂ ಅಹಮದ್ ತಾಹ ಎಂಬ ಆರೋಪಿಗಳ ಫೋಟೋವನ್ನು ಹಂಚಿಕೊಂಡಿದ್ದು, ಈ ಆರೋಪಿಗಳ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಣೆ ಮಾಡಿದೆ. ಜೊತೆಗೆ ಮಾಹಿತಿ ನೀಡಿದವರ ಮಾಹಿತಿ ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!