ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಜನಪ್ರಿಯ ಹೊಟೇಲ್ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡ ಹತ್ತು ಜನರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ಮಾಡಿದ್ದಾರೆ.
ಆಸ್ಪತ್ರೆಗೆ ರಾಜ್ಯಪಾಲರು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆ. ವೈದ್ಯರೊಂದಿಗೆ ಮಾತನಾಡಿ, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಂಸದ ಪಿಸಿ ಮೋಹನ್ ಇದ್ದರು.
ಮಧ್ಯಾಹ್ನ 12 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬ ಬ್ಯಾಗ್ ಜೊತೆ ಕೆಫೆಗೆ ಬಂದಿದ್ದಾರೆ. ರವೆ ಇಡ್ಲಿ ಸೇವಿಸಿ ಬಾಂಬ್ ಟೈಮರ್ ಇಟ್ಟು ಬ್ಯಾಗ್ ಅಲ್ಲಿಯೇ ಬಿಟ್ಟು ಹೋಗಿದ್ದಾನೆ. ಬ್ಲಾಸ್ಟ್ ಆಗಿ ಗ್ರಾಹಕರು, ಸಿಬ್ಬಂದಿ ಸೇರಿ 10 ಜನ ಗಾಯಗೊಂಡಿದ್ದಾರೆ. ಬ್ಯಾಗ್ ತಂದಿಟ್ಟ ವ್ಯಕ್ತಿಯ ಮುಖ ಸಿಸಿಟಿವಿಯಲ್ಲಿ ಕಂಡುಬಂದಿದೆ.