ಕೈದಿಗಳಿಗೂ ರಾಮಕೃಪೆ: ನೇರಪ್ರಸಾರ ವೀಕ್ಷಣೆಗೆ ಇಲ್ಲಿ ಎಲ್ಲಾ ಜೈಲುಗಳಲ್ಲಿಯೂ ಅವಕಾಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆ ಕ್ಷಣಗಳನ್ನು ಸಂಭ್ರಮಿಸಲು ಜೈಲುಗಳೂ ಸಜ್ಜಾಗುತ್ತಿವೆ.

ಉತ್ತರ ಪ್ರದೇಶದ ಎಲ್ಲಾ ಜೈಲುಗಳಲ್ಲಿಯೂ ಅಯೋಧ್ಯೆಯ ಶ್ರೀ ರಾಮಲಲಾ ಪ್ರಾಣಪ್ರತಿಷ್ಠೆ ಸಮಾರಂಭದ ನೇರಪ್ರಸಾರ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಧರ್ಮವೀರ್ ಪ್ರಜಾಪತಿ ತಿಳಿಸಿದ್ದಾರೆ.

ರಾಜ್ಯದಲ್ಲಿ 1.05 ಲಕ್ಷಕ್ಕೂ ಅಧಿಕ ಕೈದಿಗಳಿದ್ದಾರೆ. ಅವರೂ ಈ ದೇಶದ ಪ್ರಜೆಗಳು. ಅವರು ಈ ಸಂದರ್ಭದಿಂದ ದೂರ ಉಳಿಯಬಾರದು. ಕೈದಿಗಳು ಸಹ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಸಾಧ್ಯವಾಗುವಂತೆ ನೋಡಿಕೊಳ್ಳಲು ರಾಜ್ಯದ ಎಲ್ಲಾ ಜೈಲುಗಳಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!