ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯಾ ಪ್ರವಾಸದಲ್ಲಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸೋಮವಾರ ಸಂಜೆ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಶ್ರೀ ರಾಮಸೇವಾ ಸಂಕಲ್ಪ ಅಭಿಯಾನದ ಕುರಿತು ಸಮಾಲೋಚನೆ ನಡೆಸಿದರು .
ಈ ವೇಳೆ ಶ್ರೀಗಳವರನ್ನು ಆದರಪೂರ್ವಕವಾಗಿ ಸ್ವಾಗತಿಸಿದ ಯೋಗಿ ಅವರು ಸತ್ಕರಿಸಿದರು .ಶ್ರೀಗಳೂ ಯೋಗಿಯವರನ್ನು ಅಭಿನಂದಿಸಿದರು .