ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆತರಲಾಗಿದೆ. 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ (NIA) ಕಸ್ಟಡಿಗೆ ಕೋರ್ಟ್ ನೀಡಿದೆ.
ಇತ್ತ ಇದರ ನಡುವೆ ರಾಜಕೀಯ ಜಟಾಪಟಿಯೂ ಶುರುವಾಗಿದ್ದು, ರಾಣಾನನ್ನ ತಕ್ಷಣವೇ ಗಲ್ಲಿಗೇರಿಸಬೇಕು. ಆದ್ರೆ ಬಿಹಾರ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಗಲ್ಲಿಗೇರಿಸಲಿದೆ ಎಂದು ಶಿವಸೇನಾ (UTB) ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ರಾಣಾನನ್ನು ಹಸ್ತಾಂತರಿಸುವ ಪ್ರಕ್ರಿಯೆ ಕಾಂಗ್ರೆಸ್ ಆಡಳಿತದಲ್ಲೇ ಪ್ರಾರಂಭವಾಗಿದೆ. ಆದ್ದರಿಂದ ಅವನನ್ನು ಮರಳಿ ಕರೆತಂದ ಕ್ರೆಡಿಟ್ ದೇಶಕ್ಕೆ ಸಲ್ಲುತ್ತದೆ. ಯಾರೂ ವೈಯಕ್ತಿಕವಾಗಿ ಕ್ರೆಡಿಟ್ ತೆಗೆದುಕೊಳ್ಳುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ಇನ್ನು ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರಿಸಲಾದ ಮೊದಲ ಆರೋಪಿಯಲ್ಲ. ಇದಕ್ಕೂ ಮುನ್ನ 1993ರ ಸರಣಿ ಸ್ಫೋಟದ ಆರೋಪಿ ಅಬು ಸಲೇಂನನ್ನು ಕೂಡ ಭಾರತಕ್ಕೆ ಹಸ್ತಾಂತರಿಸಲಾಗಿತ್ತು ಎಂದು ನುಡಿದಿದ್ದಾರೆ.