Wednesday, March 29, 2023

Latest Posts

ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯರಿಗೆ ಸನ್ಮಾನ

ಹೊಸದಿಗಂತ ವರದಿ, ಮಡಿಕೇರಿ:

ಪದ್ಮಶ್ರೀ ಪುರಸ್ಕೃತ ಕೊಡಗಿನ ಉಮ್ಮತ್ತಾಟ್ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು.
ರಾಣಿ ಮಾಚಯ್ಯ ಅವರನ್ನು ನಗರದ ಎವಿ ಶಾಲೆ ಬಳಿಯಿಂದ ತೆರೆದ ಜೀಪ್‍ನಲ್ಲಿ ಮೆರವಣಿಗೆ ಮೂಲಕ ಕರೆ ತಂದು ಕೊಡವ ಸಮಾಜದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಾಜಿ ಸಚಿವ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಉಪಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಹಾಗೂ ನಿರ್ದೇಶಕಿ ಕಾಂಡೇರ ಲಲ್ಲು ಕುಟ್ಟಪ್ಪ ಸೇರಿದಂತೆ ಕೊಡವ ಸಮಾಜದ ಅಧೀನದಲ್ಲಿರುವ 12 ಕೇರಿಗಳ ಸದಸ್ಯರು, ಪೊಮ್ಮಕ್ಕಡ ಕೂಟದ ಪ್ರಮುಖರು, ಜನಾಂಗ ಬಾಂಧವರು ಹಾಗೂ ಸಾರ್ವಜನಿಕರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!