ರಣಜಿ ಟ್ರೋಫಿ: ಕರ್ನಾಟಕಕ್ಕೆ ಸೋಲು, ಫೈನಲ್ ಗೆ ಲಗ್ಗೆ ಇಟ್ಟ ಸೌರಾಷ್ಟ್ರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಣಜಿ ಟ್ರೋಫಿಯ ಸೆಮಿಫೈನಲ್‌ ಹಂತದಲ್ಲಿ ಸೌರಾಷ್ಟ್ರ ತಂಡದ ವಿರುದ್ಧ 4 ವಿಕೆಟ್‌ ಸೋಲು ಕಂಡ ಕರ್ನಾಟಕ ನಿರಾಸೆ ಮೂಡಿಸಿದ್ದು, ಈ ಮೂಲಕ ಫೈನಲ್‌ಗೇರುವ ಕರ್ನಾಟಕದ ಆಸೆ ಭಗ್ನಗೊಂಡಿದೆ.

115 ರನ್‌ಗಳ ಸಾಧಾರಣ ಸವಾಲು ಪಡೆದುಕೊಂಡಿದ್ದ ಸೌರಾಷ್ಟ್ರ ತಂಡ, ವಿ.ಕೌಶಿಕ್‌ (32ಕ್ಕೆ 3) ಹಾಗೂ ಕೆ. ಗೌತಮ್‌ (38ಕ್ಕೆ 3) ಮಾರಕ ದಾಳಿಯ ನಡುವೆಯೂ 6 ವಿಕೆಟ್‌ ನಷ್ಟಕ್ಕೆ 117 ರನ್ ಬಾರಿಸಿ ಫೈನಲ್‌ಗೆ ಲಗ್ಗೆ ಇಡಲು ಯಶಸ್ವಿಯಾಯಿತು.

ಮೊದಲ ಇನ್ನಿಂಗ್ಸ್‌ನಲ್ಲಿ 120 ರನ್‌ ಹಿನ್ನಡೆ ಕಂಡಿದ್ದ ಕರ್ನಾಟಕ ತಂಡ, ಐದನೇ ದಿನವಾದ ಭಾನುವಾರ 4 ವಿಕೆಟ್‌ಗೆ 123 ರನ್‌ಗಳಿಂದ ಬ್ಯಾಟಿಂಗ್‌ ಮುಂದುವರಿಸಿತು. ನಿಕಿನ್‌ ಜೋಸ್‌ (109 ರನ್‌, 161 ಎಸೆತ, 9 ಬೌಂಡರಿ) ಶತಕದ ಸಾಹಸದಿಂದ 234 ರನ್‌ಗೆ ಕರ್ನಾಟಕ ಆಲೌಟ್‌ ಆಯಿತು. ಇದರಿಂದಾಗಿ ಗೆಲುವಿಗೆ 115 ರನ್‌ಗಳ ಸವಾಲು ಪಡೆದಿದ್ದ ಸೌರಾಷ್ಟ್ರ ತಂಡ, ರಾಜ್ಯ ತಂಡದ ಬೌಲರ್‌ಗಳ ಹೋರಾಟದ ನಡುವೆಯೂ ಫೈನಲ್‌ಗೇರುವಲ್ಲಿ ಯಶಸ್ಸು ಕಂಡಿತು.

ಇನ್ನೊಂದು ಸೆಮಿಫೈನಲ್‌ ಪಂದ್ಯದಲ್ಲಿ ಮಧ್ಯಪ್ರದೇಶ ತಂಡವನ್ನು 306 ರನ್‌ಗಳಿಂದ ಮಣಿಸಿದ ಬಂಗಾಳ ತಂಡ ಫೈನಲ್‌ಗೆ ಪ್ರವೇಶ ಪಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!