ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಪ್ರದೇಶ-ಕರ್ನಾಟಕ ತಂಡಗಳ ನಡುವಿನ ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮನೀಷ್ ಪಾಂಡೆ ನೇತೃತ್ವದ ಕರ್ನಾಟಕ ಸೋಲು ಕಂಡಿತು. ಈ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ.
ಆಲೂರಿನ ಕೆಎಸ್ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ನೀಡಿದ 213ರನ್ಗಳ ಗುರಿ ಬೆನ್ನತ್ತಿದ್ದ ಉತ್ತರ ಪ್ರದೇಶ ತಂಡ 5 ವಿಕೆಟ್ಗಳ ಜಯ ದಾಖಲಿಸಿ, ಸೆಮಿಫೈನಲ್ ಪ್ರವೇಶಿಸಿತು
ತಂಡದ ಪರ 2ನೇ ಇನ್ನಿಂಗ್ಸ್ನಲ್ಲಿ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದ ಕ್ಯಾಪ್ಟನ್ ಕರಣ್ ಶರ್ಮಾ(93) ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಮೊದಲ ಇನ್ನಿಂಗ್ಸ್ನಲ್ಲಿ ಕರ್ನಾಟಕ 253ರನ್ಗಳಿಸಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಉತ್ತರ ಪ್ರದೇಶ ಕೇವಲ 155ರನ್ಗಳಿಗೆ ಆಲೌಟ್ ಆಗಿತ್ತು.ಎರಡನೇ ಇನ್ನಿಂಗ್ಸ್ನಲ್ಲಿ ಕರ್ನಾಟಕ ಕೇವಲ 114ರನ್ಗಳಿಗೆ ಆಲೌಟ್ ಆಗಿ, ಯುಪಿ ತಂಡಕ್ಕೆ 213ರನ್ಗಳ ಗೆಲುವಿನ ಗುರಿ ನೀಡಿತ್ತು.
ಈ ಗುರಿ ಬೆನ್ನತ್ತಿದ್ದ ಉತ್ತರ ಪ್ರದೇಶ 5 ವಿಕೆಟ್ ನಷ್ಟಕ್ಕೆ 213ರನ್ಗಳಿಸಿ, ಗೆಲುವು ಸಾಧಿಸಿದೆ.