ಹೊಸದಿಗಂತ ಡಿಜಿಟಲ್ ಡೆಸ್ಕ್:
18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರಿನಲ್ಲಿ ಇಂದು ಆರ್ಸಿಬಿ ವಿಜಯೋತ್ಸವ ನಡೆಯಲಿದ್ದು, ಈಗಾಗಲೇ ಆರ್ಸಿಬಿ ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ನೂಕು ನುಗ್ಗಲು ಉಂಟಾಗಿದ್ದು, ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಗೇಟ್ ನಂಬರ್ 6ರ ಬಳಿ ಗೇಟ್ ಹತ್ತಲು ಹೋದ ಯುವಕ ಬಿದ್ದು ಕಾಲು ಮುರಿದುಕೊಂಡಿದ್ದಾನೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಲಾಗಿದೆ.