ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗಷ್ಟೇ ತಮ್ಮ ತವರು ನೆಲವಾದ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿ ಮತ್ತೆ ಹೀನಾಯ ಸೋಲು ಕಂಡಿದೆ. ವಾಸ್ತವವಾಗಿ, RCB ಲಕ್ನೋವನ್ನು ಸೋಲಿಸುವ ಅವಕಾಶವನ್ನು ಹೊಂದಿತ್ತು. ಆದರೆ, ಆರ್ಸಿಬಿ ಮಾಡಿದ ತಪ್ಪಿನಿಂದಾಗಿ ಪಂದ್ಯ ಸೋತಿತ್ತು.
ಎಮ್.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಹೈವೋಲ್ಟೇಜ್ ಪಂದ್ಯದಲ್ಲಿ ಆರ್ಸಿಬಿ ಸೋತಿತ್ತು. ಇದಾದ ಬೆನ್ನಲ್ಲೇ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು.
ಬಳಿಕ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಆರ್ಸಿಬಿ ಮತ್ತೊಮ್ಮೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಹೀನಾಯ ಸೋಲು ಕಂಡಿದೆ. ಇದೀಗ ಫ್ಯಾನ್ಸ್ ಗಳಿಗೆ ಆರ್ಸಿಬಿ ಪ್ಲೇ ಆಫ್ಗೆ ಹೋಗಲು ಅವಕಾಶ ಇದ್ಯಾ? ಅನ್ನೋ ಪ್ರಶ್ನೆ ಶುರುವಾಗಿದೆ. ಅಷ್ಟೇ ಅಲ್ಲ, ಆರ್ಸಿಬಿಯಲ್ಲಿ ಕನ್ನಡಿಗರಿಗೆ ಬೆಲೆ ಇಲ್ವಾ? ಅನ್ನೋ ಮಾತುಗಳು ಕೇಳಿ ಬರುತ್ತಿದೆ.