ಹೊಸದಿಗಂತ ವರದಿ ಕಲಬುರಗಿ:
ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪಿ. ಆರ್.ಡಿ.ಪಾಟೀಲ್ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ತನಿಖೆ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಆರೋಪಿ ತನಿಖಾಧಿಕಾರಿ ವಿರುದ್ಧ ಹಣದ ಬೇಡಿಕೆ ಇಟ್ಟಿರುವ ವಿಡಿಯೋ ಪ್ರಸಾರಗೊಂಡಿರುವ ಕುರಿತು ಮಾದ್ಯಮದವರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು,ಆರೋಪಿ ಎನೂ ಹೇಳಿದ್ದಾನೆ ಎಂಬುದು ಪೋಲಿಸ್ ತನಿಖಾಧಿಕಾರಿಗಳಿಗೆ ಗೊತ್ತಿರುತ್ತದೆ.ಆದರೂ, ವಿಡಿಯೋ ಹೇಳಿಕೆ ಕುರಿತು ತನಿಖೆಗೆ ಆದೇಶಿಸಲಾಗುವುದು ಎಂದರು.
ತನಿಖೆ ಬಳಿಕ ಅಧಿಕಾರಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದು ನಿಜವೆಂಬುದು ಸಾಭೀತಾದರೆ ಆ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಸಧ್ಯಕ್ಕೆ ಕೋರ್ಟ್ ಆದೇಶದ ಮೂಲಕ ತನಿಖೆ ನಡೆಯುತ್ತಿದೆ.ಮೊದಲು ಆರೋಪಿಯ ಆಡಿಯೋದಲ್ಲಿ ಏನಿದೆ ಎಂಬುದನ್ನು ತನಿಖೆಗೆ ಒಳಪಡಿಸಲಾಗುವುದು.ತದನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.