ಪ್ರವೀಣ್ ನೆಟ್ಟಾರು ಪತ್ನಿ ನೇಮಕಾತಿ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೇಮಕಾತಿಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ.

ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ. ಹುದ್ದೆಗೆ ಬಿಜೆಪಿ ಸರ್ಕಾರ ನೇಮಕ ಮಾಡಿತ್ತು. ಮಾನವೀಯ ದೃಷ್ಟಿಯಿಂದ ಕೆಲಸ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ನೂತನ ಸರ್ಕಾರ ಅವರನ್ನು ಕೆಲಸದಿಂದ ವಜಾಗೊಳಿಸಿದೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ನೆಟ್ಟಾರು ಕುಟುಭಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ಹಾಗೂ ಕೆಲಸ ಕೊಡಿಸಲಾಗಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಅವರನ್ನು ಕೆಲಸದಿಂದ ವಜಾ ಮಾಡಿದೆ.

ಈ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ತನ್ನ ಬುದ್ಧಿ ತೋರಿಸುತ್ತಿದೆ. ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!