ಹೊಸದಿಗಂತ ಡಿಜಿಟಲ್ ಡೆಸ್ಕ್:
2000 ರಲ್ಲಿ ನಡೆದ ಕೆಂಪುಕೋಟೆ ದಾಳಿ ಪ್ರಕರಣದಲ್ಲಿ ಎಲ್ಇಟಿ ಭಯೋತ್ಪಾದಕ ಮೊಹಮ್ಮದ್ ಆರಿಫ್ಗೆ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಗುರುವಾರ ದೃಢಪಡಿಸಿದೆ.
2000 ರಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಪ್ರಾಣ ಕಳೆದುಕೊಂಡಿದ್ದರು.
ಮೊಹಮ್ಮದ್ ಆರಿಫ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಆತನ ಮರಣದಂಡನೆಯನ್ನು ದೃಢಪಡಿಸಿದೆ.
ದಾಳಿ ನಡೆದ ಮೂರು ದಿನಗಳ ನಂತರ ಆರಿಫ್ನನ್ನು ಬಂಧಿಸಲಾಗಿತ್ತು. ಆತನ ಮರಣದಂಡನೆಯನ್ನು ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2007 ರಲ್ಲಿ ವಿಧಿಸಿತ್ತು.