ನಾಳೆಯಿಂದ ಕೆಂಪು ಕಲ್ಲು ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಸರಗೋಡು ತಾಲೂಕು ಕೆಂಪುಕಲ್ಲು ಕಾರ್ಮಿಕರ ಸಂಯುಕ್ತ ಸಂಘಟನೆಗಳು ವಿವಿಧ ಬೇಡಿಕೆಗಳೊಂದಿಗೆ ಬುಧವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆನೀಡಿದೆ. ಸಂಬಳ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾಸರಗೋಡು ತಾಲೂಕಿನಾದ್ಯಂತ ಕೆಂಪುಕಲ್ಲು ಸಾಗಾಟದ ಲಾರಿ ಚಾಲಕರು ಹಾಗೂ ಲೋಡಿಂಗ್ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಯುಕ್ತ ಯೂನಿಯನ್ ಕಾಸರಗೋಡು ತಾಲೂಕು ಅಧ್ಯಕ್ಷ ಪ್ರಮೋದ್ ಉದುಮ ಹಾಗೂ ಕಾರ್ಯದರ್ಶಿ ಪ್ರಕಾಶ್ ಮಾನ್ಯ ಜಂಟಿ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!