ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನದ ತಿಕ್ಕಾಟದ ನಡುವೆ ಬಿಟಿಎಂ ಲೇಔಟ್ ಶಾಸಕ ರಾಮಲಿಂಗ ರೆಡ್ಡಿಗೆ ಡಿಸಿಎಂ ಸ್ಥಾನ ನೀಡಲೇಬೇಕು ಅಂತ ರಾಮಲಿಂಗ ರೆಡ್ಡಿ ಪರ ರೆಡ್ಡಿ ಸಮುದಾಯ ಪಟ್ಟು ಹಿಡಿದಿದೆ.
ಈ ಬಗ್ಗೆ ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ರೆಡ್ಡಿ ಸಮುದಾಯದ ಅಧ್ಯಕ್ಷ ರಾಮಚಂದ್ರ ರೆಡ್ಡಿ ಅವರು, ಈಗ ಸಚಿವ ಸಂಪುಟ ರಚನೆ ಆಗ್ತಾ ಇದೆ. ಪ್ರಥಮ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಆಗಿದ್ರು, ನಂತರ ರಾಮಲಿಂಗಾ ರೆಡ್ಡಿ ಅವರನ್ನು ಬೆಳೆಸಿಕೊಂಡು ಬಂದ್ವಿ. ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಆಗುವ ಎಲ್ಲ ಅರ್ಹತೆ ಇದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗಿಂತಲೂ ಹೆಚ್ಚು ಬಾರಿ ರಾಮಲಿಂಗಾರೆಡ್ಡಿ ಶಾಸಕರಾಗಿದ್ದಾರೆ ಎಂದು ಹೇಳಿದ್ದಾರೆ.