ಹೊಸದಿಗಂತ ಡಿಜಿಟಲ್ ಡೆಸ್ಕ್ :
ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಸಾವಯವ ಕೃಷಿಗೆ ಆದ್ಯತೆಯನ್ನು ನೀಡಿದ್ದಾರೆ.
ರಾಸಾಯನಿಕ ಮುಕ್ತ ಸಹಜ/ಸಾವಯವ ಕೃಷಿಗೆ ಆದ್ಯತೆ ನೀಡುವ ಪರಿಪಾಠವನ್ನು ಈ ವರ್ಷವೂ ಸಚಿವರು ಮುಂದುವರಿಸಿದ್ದಾರೆ. ಈ ಮಾದರಿಯ ಕೃಷಿ ಪದ್ಧತಿಗೆ ಅಗತ್ಯ ಬೆಂಬಲ ಒದಗಿಸಲು ಪರಿಣಿತರ ಸಮಿತಿಯನ್ನು ರೂಪಿಸಲಾಗುವುದು. ಸಹಜ/ಸಾವಯವ ಕೃಷಿಗೆ ಮರಳುವ 1 ಕೋಟಿ ರೈತರಿಗೆ ಸರ್ಕಾರದ ನೆರವು ಸಿಗಲಿದೆ ಎಂದು ಸಚಿವರು ಘೋಷಿಸಿದರು.