ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು, ನಿರಾಶ್ರಿತರು ಮಣಿಪುರ ಬಿಟ್ಟು ಮಿಜೋರಾಂ ಕಡೆಗೆ ಸಂಚರಿಸುತ್ತಿದ್ದಾರೆ. 11 ಸಾವಿರಕ್ಕೂ ಹೆಚ್ಚು ಮಂದಿ ನಿರಾಶ್ರಿತರು ಮಿಜಾರಾಂ ತಲುಪಿದ್ದು, ಪರಿಹಾರ ಹಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಒಂದು ತಿಂಗಳಿನಿಂದ ಮಣಿಪುರದಲ್ಲಿ ಮೈತ್ರೇಯಿ ಹಾಗೂ ಬುಡಕಟ್ಟು ಸಮುದಾಯದವರ ನಡುವೆ ಹಿಂಸಾಚಾರ ನಡೆಯುತ್ತಿದ್ದು, ನೂರಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ. ಇಂಟರ್ನೆಟ್ ಸ್ಥಗಿತ, ಕರ್ಫ್ಯೂ ಹೇರಿಕೆ ಮಾಡಿದ್ದರೂ ಹಿಂಸಾಚಾರ ನಡೆಯುತ್ತಲೇ ಇದೆ.
ರಾಜ್ಯ ಪ್ರವಾಸೋದ್ಯಮ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟ್ ಅವರು ಕೇಂದ್ರಕ್ಕೆ ಮನವಿ ಮಾಡಿದ್ದು, ಸಹಾಯದ ಅವಶ್ಯಕತೆ ಇದೆ, ಪರಿಹಾರ ನಿಧಿ ನೀಡದಿದ್ದರೆ ರಾಜ್ಯ ಸರ್ಕಾರ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ಮಣಿಪುರದಲ್ಲಿ ಮತ್ತೆ ಶಾಂತಿ ಸ್ಥಾಪನೆಗೆ ಸಹಾಯ ಮಾಡಿ ಎಂದು ಹೇಳಿದ್ದಾರೆ.
ಮಣಿಪುರದಲ್ಲಿ ಹಿಂಸಾಚಾರ ಆರಂಭವಾದಾಗಿನಿಂದ ಮಿಜೋರಾಂನ ಸಾಕಷ್ಟು ಭಾಗಗಳಲ್ಲಿ ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಉಳಿದುಕೊಂಡಿದ್ದಾರೆ. ಇವರಿಗೆ ಪರಿಹಾರ ನೀಡಿ ಎಂದು ರಾಜ್ಯ ಕೇಂದ್ರಕ್ಕೆ ಮನವಿ ಮಾಡಿದೆ.