ತಮಿಳುನಾಡಿಗೆ ಇನ್ನೂ15 ದಿನ ಐದು ಸಾವಿರ ಕ್ಯೂಸೆಕ್‌ ನೀರು ಬಿಡಿ: ಕರ್ನಾಟಕಕ್ಕೆ CWRC ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿಗೆ ಕಾವೇರಿ ನೀರು ನಿಯಂತ್ರಣ ಸಮಿತಿ ನಿತ್ಯ ಐದು ಸಾವಿರ ಕ್ಯೂಸೆಕ್‌ನಂತೆ ಹದಿನೈದು‌ ದಿನಗಳ ಕಾಲ ನೀರು ಹರಿಸಲು ಕರ್ನಾಟಕಕ್ಕೆ ಶಿಫಾರಸು ಮಾಡಿದೆ.

ಆಗಸ್ಟ್ 29 ರ ಆದೇಶ ಅಂತ್ಯವಾದ ಹಿನ್ನೆಲೆ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿ ತನ್ನ ಹಳೆ ಆದೇಶವನ್ನು ಮುಂದಿನ ಹದಿನೈದು ದಿನ ಮುಂದುವರಿಸಲು ಸೂಚನೆ ನೀಡಿದೆ.

ಸಮಿತಿಯ ಈ ಆದೇಶದಿಂದ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಿಸುವ ಸಾಧ್ಯತೆಗಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!