ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜೀವ್ ಗಾಂಧಿ ಹಂತಕರ ಪೈಕಿ ಆರು ಮಂದಿಯನ್ನು ಬಿಡುಗಡೆ ಮಾಡುವಂತೆ ನವೆಂಬರ್ 11ರಂದು ಹೊರಡಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳಿಗೆ ವಿನಾಯಿತಿ ನೀಡುವ ನವೆಂಬರ್ 11ರ ಆದೇಶ ಮರುಪರಿಶೀಲಿಸುವಂತೆ ಕೋರಿ ಕೇಂದ್ರವು ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಸಿದೆ.
ಮಾಜಿ ಪ್ರಧಾನಿ ಸೇರಿದಂತೆ 21 ಜನರ ಹತ್ಯೆಗೆ ಕಾರಣವಾಗಿದ್ದ ಪ್ರಕರಣದ ಅಪರಾಧಿಗಳ ಬಿಡುಗಡೆ ಮಾಡಲು ಆದೇಶಿಸಿದ ಸುಪ್ರೀಂ ಕೋರ್ಟ್ ನಿರ್ಧಾರ ‘ಕಾನೂನು ದೋಷದಿಂದ ಕೂಡಿದೆ’ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ. ಅಲ್ಲದೇ ಅಪರಾಧಿಗಳ ಬಿಡುಗಡೆ ವಿರುದ್ಧ ತನಗೆ ವಾದಿಸಲು ನ್ಯಾಯಾಲಯದಿಂದ ಅನುಮತಿ ಕೋರಿದೆ.