ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ: ಹಂಪಿಯ ಸ್ಮಾರಕಗಳಿಗೆ ಜಲದಿಗ್ಬಂದನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯದ ನೀರು ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಐತಿಹಾಸಿಕ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಧಾರ್ಮಿಕ ಮಂಟಪಗಳು ಮತ್ತು ಸ್ನಾನಗೃಹಗಳು ಜಲಾವೃತಗೊಂಡವು.

ಪುರಂದರದಾಸ ಮಂಟಪವೂ ಮುಳುಗಡೆಯಾಗಿದೆ. ಕೋದಂಡರಾಮ ದೇವಸ್ಥಾನದ ಬಳಿ ನದಿ ನೀರು ಹರಿಯುತ್ತಿತ್ತು. ತುಂಗಭದ್ರಾ ಜಲಾಶಯದಿಂದ 30 ಕ್ರಸ್ಟ್ ಗೇಟ್​​​ಗಳ ಮೂಲಕ ನದಿಗೆ ನೀರು ಬಿಡಲಾಗುತ್ತದೆ. ಇದರಿಂದ ಹಂಪಿಯಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಸಿಗರು ನದಿಗೆ ಇಳಿಯದಂತೆ ಸೂಚಿಸಲಾಗಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ನದಿಗಳು ಕೂಡ ಎಚ್ಚರಿಕೆಯ ಮಟ್ಟವನ್ನು ದಾಟುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!