ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಪ್ರತಿಭಟನೆಯಲ್ಲಿ ಭಾಗಿಯಾಗಲು ರಾಜ್ಯದ ರೈತರು ತೆರಳಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ವಾರಣಾಸಿಗೆ ಸ್ಥಳಾಂತರಿಸುತ್ತಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ಗೆ ಪತ್ರ ಬರೆದಿದ್ದಾರೆ.
ನಮ್ಮ ರಾಜ್ಯದ ರೈತರನ್ನು ಸ್ಥಳಾಂತರ ಮಾಡಬೇಡಿ, ಕೂಡಲೇ ಬಿಡುಗಡೆ ಮಾಡಿ ಎಂದು ಮನವಿ ಪತ್ರ ಬರೆದಿದ್ದಾರೆ. ನಮ್ಮ ರಾಜ್ಯದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೊರಟಿದ್ದರು. ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ಭೋಪಾಲ್ ಪೊಲೀಸರು ನಮ್ಮ ರೈತರನ್ನು ಬಂಧಿಸಿದ್ದಾರೆ. ನಾಲ್ಕು ದಿನಗಳಿಂದ ನಮ್ಮ ರೈತರು ತಪ್ಪೇ ಮಾಡದೆ ಕಷ್ಟ ಅನುಭವಿಸುತ್ತಿದ್ದಾರೆ. ಈ ಕೂಡಲೇ ಅವರನ್ನು ಬಿಡುಗಡೆ ಮಾಡಿ ಎಂದು ಬರೆದಿದ್ದಾರೆ.