ಮಾಜಿ ಪರಿಷತ್ ಸದಸ್ಯ ಡಿಎಸ್ ವೀರಯ್ಯಗೆ ರಿಲೀಫ್: ದೇವರಾಜ್ ಅರಸು ಟ್ರಕ್ ಟರ್ಮಿನಲ್ ಕೇಸ್ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇವರಾಜ್ ಅರಸು ಟ್ರಕ್ ಟರ್ಮಿನಲ್ ಹಗರಣದಲ್ಲಿ ಮಾಜಿ ಪರಿಷತ್ ಸದಸ್ಯ ಡಿಎಸ್ ವೀರಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ ಎಸ್ ವೀರಯ್ಯ ಅವರನ್ನು CID ಅಧಿಕಾರಿಗಳು ಜುಲೈ.12, 2024ರಲ್ಲಿ ಬಂಧಿಸಿದ್ದರು.

ಡಿಎಸ್ ವೀರಯ್ಯ ಅಧ್ಯಕ್ಷರಾಗಿದ್ದ ಕಾಲದಲ್ಲಿ ಸುಮಾರು 47 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪದ ಅವರ ಮೇಲಿತ್ತು.

ಕೋರ್ಟ್ ಮೊರೆ ಹೋಗಿದ್ದಂತ ಡಿಎಸ್ ವೀರಯ್ಯ ಅವರಿಗೆ ಜಾಮೀನು ಮಂಜೂರಾಗಿತ್ತು.

ಜಾಮೀನಿನಿಂದ ಹೊರಬಂದಿದ್ದ ವೀರಯ್ಯ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನು ಒಳಗೊಂಡ ನ್ಯಾಯಪೀಠವು, ವಾದ ಪ್ರತಿವಾದವನ್ನು ಆಲಿಸಿ, ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!