ಹೊಸದಿಗಂತ ಡಿಜಿಟಲ್ ಡೆಸ್ಕ್
ಹಿಂದೂಗಳ ಮತಾಂತರ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಎಎಪಿ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರ ವಿರುದ್ಧ ದಾಖಲಾಗಿರುವ ದೂರಿನ ಸಂಬಂಧ ಮಂಗಳವಾರ ಮೂರು ಗಂಟೆಗಳ ಕಾಲ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 10 ಸಾವಿರ ಮಂದಿಯನ್ನು ಹಿಂದೂ ಧರ್ಮದಿಂದ ಮತಾಂತರಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳನ್ನು ನಿಂದಿಸಲಾಗಿತ್ತು ಎಂದು ಆಕ್ರೋಶಗಳು ಭುಗಿಲೆದ್ದಿತ್ತು.
ಈ ಕಾರ್ಯಕ್ರಮದ ವಿವಾದದಿಂದಾಗಿ ರಾಜೇಂದ್ರ ಪಾಲ್ ದೆಹಲಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಗೌತಮ್ ಪಹರ್ಗಂಜ್ ಪೊಲೀಸ್ ಠಾಣೆಯಲ್ಲಿ ಮಧ್ಯಾಹ್ನ 2:30 ರ ಸುಮಾರಿಗೆ ವಿಚಾರಣೆಗೆ ಹಾಜರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
“ರಾಜೇಂದ್ರ ಪಾಲ್ ಗೌತಮ್ ವಿರುದ್ಧ ದೂರು ಇತ್ತು. ಹಾಗಾಗಿ ಪ್ರಕರಣದ ವಿಚಾರಣೆಯ ಭಾಗವಾಗಿ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ದೂರಿಗೆ ಸಂಬಂಧಿಸಿದಂತೆ ಅವರಿಗೆ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶ್ವೇತಾ ಚೌಹಾಣ್ ಹೇಳಿದ್ದಾರೆ.
ವಿಚಾರಣೆ ಪೂರ್ಣಗೊಂಡ ನಂತರ, ಅವರು ಸಂಜೆ 5:30 ರ ಸುಮಾರಿಗೆ ಪೊಲೀಸ್ ಠಾಣೆಯನ್ನು ತೊರೆದರು ಎಂದು ಅವರು ಹೇಳಿದರು.
ಪೊಲೀಸರ ಪ್ರಕಾರ, ಗೌತಮ್ ಅವರು ಕಾರ್ಯಕ್ರಮದ ದಿನದಂದು ನಡೆದ ಘಟನೆಗಳ ಅನುಕ್ರಮ, ವಿವಾದಕ್ಕೆ ಕಾರಣವಾದ ಭಾಷಣದ ಹಿಂದಿನ ಉದ್ದೇಶಗಳು ಮತ್ತು ಈವೆಂಟ್ಗೆ ಸಂಬಂಧಿಸಿದ ದಾಖಲೆಗಳು, ಆಮಂತ್ರಣ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಪ್ರಶ್ನಿಸಲಾಯಿತು.
“ನಾವು ಈವೆಂಟ್ನ ಇತರ ಸಂಘಟಕರನ್ನು ಕೂಡ ಶೀಘ್ರದಲ್ಲೇ ಪ್ರಶ್ನಿಸುತ್ತೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ