ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಪ್ರಾರಂಭವಾಗಿರುವ ಈ ಹಿಜಾಬ್ ವಿವಾದ ರಾಜ್ಯದಲ್ಲಿ ಅಶಾಂತಿಯ ವಾತಾವರಣ ಉಂಟುಮಾಡಿದ್ದು, ಮುಗ್ಧ ವಿದ್ಯಾರ್ಥಿಗಳಲ್ಲಿ ಕೋಮು ವಿಭಜನೆಯನ್ನು ಸೃಷ್ಟಿಸುತ್ತಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ಮಕ್ಕಳ ನಿಧಿ ಮಯಂ ಸಂಸ್ಥಾಪಕ ಕಮಲ್ ಹಾಸನ್ ಹಿಜಾಬ್ ಕುರಿತು ಟ್ವೀಟ್ ಮಾಡಿದ್ದು, ಕರ್ನಾಟಕದಲ್ಲಿ ನಡೆಯುತ್ತಿರುವ ಗಲಾಟೆ ಅಶಾಂತಿಯನ್ನು ಪ್ರಚೋದಿಸುತ್ತಿದೆ. ಈ ಮೂಲಕ ಮುಗ್ಧ ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆ ಸೃಷ್ಟಿಸುತ್ತಿದೆ ಎಂದಿದ್ದಾರೆ. ಈ ಘಟನೆ ತಮಿಳುನಾಡಿನಲ್ಲಿ ಸಂಭವಿಸಬಾರದು. ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.
ಈಗಾಗಲೇ ಕರ್ನಾಟಕದಲ್ಲಿ ಹಿಜಾಬ್- ಕೇಸರಿ ವಿವಾದ ತಾರರಕ್ಕೇರಿದ್ದು, ಸಿಎಂ ಬೊಮ್ಮಾಯಿ ಸರ್ಕಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
கர்நாடகாவில் நடப்பது கலக்கத்தைத் தூண்டுகிறது. கள்ளமில்லா மாணவர்கள் மத்தியில் மதவாத விஷச் சுவர் எழுப்பப்படுகிறது. ஒற்றைச் சுவர் தாண்டியிருக்கும் பக்கத்து மாநிலத்தில் நடப்பது தமிழ்நாட்டுக்கும் வந்துவிடக் கூடாது. முற்போக்கு சக்திகள் மேலும் கவனமாக இருக்க வேண்டிய காலம் இது.
— Kamal Haasan (@ikamalhaasan) February 9, 2022