ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಗೆ ನಿಮ್ಮನ್ನು ಕರೆತಂದವರು ಯಡಿಯೂರಪ್ಪ ಅನಗತ್ಯವಾಗಿ ಬಿಎಸ್ವೈ ಅವರನ್ನು ಟೀಕೆ ಮಾಡಿದರೆ ನಾವು ಸಹಿಸಲ್ಲ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಇನ್ಮುಂದೆ ಯಡಿಯೂರಪ್ಪ ಬಗ್ಗೆ ಅನಾವಶ್ಯಕ ಮಾತಾಡಿದರೆ ತಕ್ಕ ಪಾಠ ಕಲಿಸ್ತೇವೆ. ರಮೇಶ್ ಜಾರಕಿಹೊಳಿ ಅವರೇ ಎರಡು ಪಕ್ಷ ಸುತ್ತಿ ಬಿಜೆಪಿಗೆ ಬಂದಿದ್ದೀರ. ಯಡಿಯೂರಪ್ಪ ಬಗ್ಗೆ ಹಗುರವಾಗಿ ಮಾತಾಡಿರೋದು ನಮಗೆ, ಕಾರ್ಯಕರ್ತರಿಗೆ ನೋವು ತಂದಿದೆ. ಮುಂದಿನ ವಾರ ಮತ್ತೊಂದು ಸಭೆ ನಡೆಸಿ ಒಂದು ತೀರ್ಮಾನ ಮಾಡ್ತೇವೆ ಎಂದು ಎಚ್ಚರಿಸಿದ್ದಾರೆ.