ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಗಳಲ್ಲೂ ಯಾವುದೇ ಪ್ರಭಾವ ಬೀರುವುದಿಲ್ಲ. ಈಗಾಗಲೇ ಟಿಕೆಟ್ ಕಳೆದುಕೊಂಡಿರುವ ಪ್ರತಿಯೊಬ್ಬರೊಂದಿಗೆ ವೈಯಕ್ತಿಕವಾಗಿ ಮಾತನಾಡುವ ಕೆಲಸ ಆಗಿದೆ. ಪ್ರತಿ ಸ್ಥಾನದಂತೆ ಪ್ರತಿಯೊಬ್ಬರಿಗೂ ಪ್ರತಿ ಮತವೂ ಮುಖ್ಯವಾಗಿದೆ. ನಾವು ಅತೃಪ್ತರಿಗೆ ಮನವರಿಕೆ ಮಾಡುತ್ತೇವೆ ಮತ್ತು ಅವರಿಗೆ ವಿಶ್ವಾಸ ನೀಡುತ್ತೇವೆ ಎಂದರು.
ಇನ್ನೊಂದು ಪ್ರಮುಖ ಅಂಶವೆಂದರೆ ಇಲ್ಲಿ ಹಾಕುವ ಪ್ರತಿಯೊಂದು ಮತವೂ ನರೇಂದ್ರ ಮೋದಿಯವರ ಮುಖ ನೋಡಿಕೊಂಡು ಬರುವುದು ಎಂದು ತಿಳಿದುಕೊಳ್ಳಬೇಕು. ನಾನು ಮತ ಹಾಕಿ ಗೆದ್ದಿದ್ದೇನೆ ಎಂದು ಯಾರೂ ಭಾವಿಸಬಾರದು ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಟಿ. ರವಿ, ತಮ್ಮ ವಿರುದ್ಧ ಪ್ರತಿಭಟನೆ ಮಾಡಿಸಿದವರಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ಯಾವ ಉದ್ದೇಶವಿದೆಯೋ ಗೊತ್ತಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಆಕಾಂಕ್ಷಿಯೇ ಆಗಿರಲಿಲ್ಲ. ನಾನು ಆಕಾಂಕ್ಷಿಯೇ ಅಲ್ಲ ಅಂದ ಮೇಲೆ ಆ ಪ್ರಶ್ನೆಯೇ ಬರಲ್ಲ ಎಂದು ಹೇಳಿದ್ದಾರೆ.