ಕನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರ ಎಚ್.ಎಸ್ ವೆಂಕಟೇಶಮೂರ್ತಿ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರರು ಎಚ್.ಎಸ್ ವೆಂಕಟೇಶಮೂರ್ತಿ ವಿಧಿವಶರಾಗಿದ್ದಾರೆ.

ಮೂಲತಃ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಗ್ರಾಮದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದರು.

ಕನ್ನಡದಲ್ಲಿ `ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಕನ್ನಡದಲ್ಲಿ 100ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!