ಅರಣ್ಯ ಇಲಾಖೆ ರಾಯಭಾರಿಯಾಗಿ ಖ್ಯಾತ ಕ್ರೀಡಾಪಟು, ಕನ್ನಡಿಗ ಅನಿಲ್ ಕುಂಬ್ಳೆ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರೋ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಅನಿಲ್ ಕುಂಬ್ಳೆ ಅವರಿಗೆ ಇದೆ. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆಗೆ ರಾಯಭಾರಿ ಆಗಲಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಅರಣ್ಯ ಇಲಾಖೆ ಭ್ರಷ್ಟಾಚಾರದ ಕೂಪ.ಸಭ್ಯ ಸಜ್ಜನ ಹಾಲಿನಂಥಹ ಮನಸ್ಸಿನ ಕುಂಬ್ಳೆಯವರಿಗೆ ಈ ಹುದ್ದೆ(?)ಖಂಡಿತ ಹೇಳಿಸಿದ್ದಲ್ಲ.

LEAVE A REPLY

Please enter your comment!
Please enter your name here

error: Content is protected !!