ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್ ಎ2 ಹಾಗೂ ಕೆ. ಪವನ್ ಎ3 ಆಗಿದ್ದಾನೆ.
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದ್ದು, 13 ಜನರ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ. ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ.ಹೀಗಾಗಿ ದರ್ಶನ್ ಜೈಲುಪಾಲಾಗುವ ಸಾಧ್ಯತೆ ದಟ್ಟವಾಗಿದೆ.
ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರ ವಿರುದ್ಧ ಅನೇಕ ಸಾಕ್ಷಿಗಳು ಸಿಗುತ್ತಿವೆ. ಕೊಲೆ ನಡೆದ ಶೆಡ್ಗೆ ಅದೇ ರಾತ್ರಿ ದರ್ಶನ್ ಕಾರು ಬಂದಿತ್ತು ಎಂಬುದಕ್ಕೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿವೆ. ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಾಗಿದೆ.